बैंगलूरु-कर्नाटकखबरों की खबर
ಜಯಕರ್ನಾಟಕದ ವಿಶ್ವ ಕನ್ನಡ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಸಮಾವೇಶ ಮುಕ್ತಾಯವಾಯಿತು

ಜಯಕರ್ನಾಟಕ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಬಿ ಎನ್ ಜಗದೀಶ್ ಅವರ ಸೂಚನೆಯಂತೆ ನವಂಬರ್ ತಿಂಗಳಲ್ಲಿ ನಡೆಯುವ “ವಿಶ್ವ ಕನ್ನಡಿಗರ ಸಮ್ಮಿಲನದ” ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಇಂದು ಮೈಸೂರು ಜಿಲ್ಲಾ ಅಧ್ಯಕ್ಷರಾದ ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಮಿತಿ ಸಭೆಯನ್ನು ಮಾಡಲಾಯಿತು. ಕಾರ್ಯಕ್ರಮಕ್ಕೆ ಬೇಕಾದ ಪೂರ್ವ ಸಿದ್ಧತೆ ಹಾಗೂ ಪದಾಧಿಕಾರಿಗಳ ಆಯ್ಕೆಯ ಬಗ್ಗೆ ಚರ್ಚೆಮಾಡಲಾಯಿತು. ಸಂಜುಗೌಡ ಮೈಸೂರು ಜಿಲ್ಲಾ ಯುವ ಘಟಕ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಜಿಲ್ಲಾ ಯುವ ಮುಖಂಡರಾದ ಅಜಯ್ ಶಾಸ್ತ್ರಿ ಹಾಗು ಇನ್ನಿತರ ಪದಾಧಿಕಾರಿಗಳು ಸಭೆಯನ್ನು ಉದ್ದೇಶಿಸಿ ಮಾತನಾಡಿದರು
ಇಂತಿ,
ವಿಜಯಗೌಡ
ರಾಜ್ಯ ಸಂಘಟನಾ ಕಾರ್ಯದರ್ಶಿ
ಜಯ ಕರ್ನಾಟಕ.


















